ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
TSK
TSK · ದಾನಿಯೇಲನು 9:19
Treasury of Scripture Knowledge references in ಕನ್ನಡ IRV.
ಇದಲ್ಲದೆ, ನೀನು ನಿನ್ನ ಸೇವಕನ ಹಾಗೂ ನಿನ್ನ ಪ್ರಜೆಗಳಾದ ಇಸ್ರಾಯೇಲರ ವಿಜ್ಞಾಪನೆಯನ್ನು ಲಾಲಿಸು. ಅವರು ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ವಿಜ್ಞಾಪನೆಯನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.
ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು, ವಿಜ್ಞಾಪನೆಯನ್ನು ಆಲಿಸಿ, ಅವರಿಗೆ ನ್ಯಾಯವನ್ನು ಪಾಲಿಸಿ ನಿನಗೆ ವಿರುದ್ಧವಾಗಿ ಪಾಪಮಾಡಿದ ನಿನ್ನ ಪ್ರಜೆಗಳಿಗೆ ಕ್ಷಮೆಯನ್ನು ಅನುಗ್ರಹಿಸು.
ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.
ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.
ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?
ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.
ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.
ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.
ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.
‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
¶ ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ.
ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.
‹ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.›
ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.