¶ ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.
TSK
TSK · ದಾನಿಯೇಲನು 9:25
Treasury of Scripture Knowledge references in ಕನ್ನಡ IRV.
¶ ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ.
¶ ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.
ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.
¶ ಹೀಗೆ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಬಾಗಿಲುಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಗೋಪುರದವರೆಗೆ ಗೋಡೆಕಟ್ಟಿ ಅದನ್ನು ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಗೋಪುರದವರೆಗೂ ಕಟ್ಟಿದರು.
ನಾವು ಒಟ್ಟಾಗಿ ಯೆರೂಸಲೇಮಿನವರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗಿ ಅವರನ್ನು ಗಲಿಬಿಲಿಗೊಳಿಸೋಣ ಎಂದು ಒಳಸಂಚು ಮಾಡಿಕೊಂಡರು.
¶ ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಪೂರ್ಣಗೊಂಡಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.
ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,
ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.
ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.
ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.
‹ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ”› ಎಂದು ಹೇಳಿದನು.
¶ ‹“ಇದಲ್ಲದೆ›‹ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ› (ಇದನ್ನು ಓದುವವನು ತಿಳಿದುಕೊಳ್ಳಲಿ). ‹ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.›
¶ ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,
ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.
ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.