TSK

TSK · ದಾನಿಯೇಲನು 9:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;

‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.

¶ ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು

ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.

ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,

ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,

ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.

ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.

ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.

ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.

ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.

¶ ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.

ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.