TSK

TSK · ದಾನಿಯೇಲನು 9:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.

ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.

ನಮ್ಮ ಅರಸರೂ, ಪ್ರಭುಗಳೂ, ಯಾಜಕರೂ, ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ. ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಗಮನಿಸಲಿಲ್ಲ.

ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.

ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.

ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.

ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,

ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.

“ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.

¶ ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.

‹ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,›

‹ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.›

ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.