ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.
TSK
TSK · ಧರ್ಮೋಪದೇಶಕಾಂಡ 1:17
Treasury of Scripture Knowledge references in ಕನ್ನಡ IRV.
ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.
¶ “‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
¶ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
¶ ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.
ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.
ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.
ಅವನು ಅವರಿಗೆ, “ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ.
ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು.
ನಾನು ಬಾಗಿಲು ದಾಟದೆ ಮೌನವಾಗಿದ್ದು, ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಡಿ, ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ,
ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.
ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.
ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.
ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.
ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.
ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.
¶ ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,
¶ ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.
ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.
ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.