¶ ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು.
TSK
TSK · ಧರ್ಮೋಪದೇಶಕಾಂಡ 10:8
Treasury of Scripture Knowledge references in ಕನ್ನಡ IRV.
ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.
¶ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡಿದ ಕಾಲದಲ್ಲಿದ್ದ ಮೋಶೆ ಮತ್ತು ಆರೋನರ ವಂಶದವರು.
ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.
“ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,
¶ ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,
ಲೇವಿಯರು ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.
¶ ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.
ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ.
ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.
ಇಸ್ರಾಯೇಲರ ಎಲ್ಲಾ ಹಿರಿಯರು ಒಟ್ಟಾಗಿ ಬಂದಾಗ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.
ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.
ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವರ ಮಂಜೂಷವನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದರು.
ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.
ಇಸ್ರಾಯೇಲ್ಯರ ಹಿರಿಯರೆಲ್ಲರೂ ಕೂಡಿ ಬಂದಾಗ, ಲೇವಿಯರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.
ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.
ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ.
ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.
‹ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.›
¶ ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,
ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.