ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.
TSK
TSK · ಧರ್ಮೋಪದೇಶಕಾಂಡ 11:2
Treasury of Scripture Knowledge references in ಕನ್ನಡ IRV.
ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.
ಆಗ ನೀವು ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.
ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.
ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,
ನೀನು ಯೆಹೋವನಲ್ಲಿ ಭರವಸವಿಡಬೇಕೆಂದು, ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ.