ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.
TSK
TSK · ಧರ್ಮೋಪದೇಶಕಾಂಡ 13:10
Treasury of Scripture Knowledge references in ಕನ್ನಡ IRV.
¶ “‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.
¶ ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.
ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.
ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.
ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.