TSK

TSK · ಧರ್ಮೋಪದೇಶಕಾಂಡ 13:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.

¶ ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.

ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ.

ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.

ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.