TSK

TSK · ಧರ್ಮೋಪದೇಶಕಾಂಡ 13:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.

ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.

ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.

ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.

¶ ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.

ಈವರೆಗೆ ಹೇಗೊ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವನನ್ನೇ ಆತುಕೊಂಡಿರಿ.

ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.

ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.

ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.

ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.

ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.

ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.

ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”

¶ ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.