“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.
TSK
TSK · ಧರ್ಮೋಪದೇಶಕಾಂಡ 17:2
Treasury of Scripture Knowledge references in ಕನ್ನಡ IRV.
ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.
ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,
¶ “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.
ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’” ಎಂದು ಹೇಳು ಎಂಬುದೇ.
ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.
ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.
ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.
ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.
‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.