ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.
TSK
TSK · ಧರ್ಮೋಪದೇಶಕಾಂಡ 17:8
Treasury of Scripture Knowledge references in ಕನ್ನಡ IRV.
ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಹೊಡೆದರೆ, ಅವನಿಗೆ ತಕ್ಕ ಶಿಕ್ಷೆಯಾಗಬೇಕು.
¶ ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.
ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.
ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.
ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು.
ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.
ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.
¶ ಅದೇ ಕಾಲದಲ್ಲಿ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.
ಇದಲ್ಲದೆ, ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಲೇವಿಯರಿಂದಲೂ, ಯಾಜಕರಿಂದಲೂ, ಇಸ್ರಾಯೇಲ್ ಗೋತ್ರ ಪ್ರಧಾನರಿಂದಲೂ, ಕೆಲವರನ್ನು ಆರಿಸಿ ಯೆಹೋವನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ, ಕಲಹಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವುದಕ್ಕಾಗಿ ಅವರನ್ನು ಯೆರೂಸಲೇಮಿನಲ್ಲೇ ಇರಿಸಿದನು.
ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.
ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;