TSK

TSK · ಧರ್ಮೋಪದೇಶಕಾಂಡ 2:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.

ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು.

ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.

¶ ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.

ಜನರಿಗೆ, ‹“ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ”› ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.

ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.