TSK

TSK · ಧರ್ಮೋಪದೇಶಕಾಂಡ 21:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು.

¶ “‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.

ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.

ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.

ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.

ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,

ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.

ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು, ಕೆಡುಕನಿಗೆ ಜೊತೆಗಾರನು.

ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.

ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.

ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.

“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?