¶ “‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
TSK
TSK · ಧರ್ಮೋಪದೇಶಕಾಂಡ 21:8
Treasury of Scripture Knowledge references in ಕನ್ನಡ IRV.
ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.
ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.
ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.
‹ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.›