TSK

TSK · ಧರ್ಮೋಪದೇಶಕಾಂಡ 23:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.

¶ ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’

ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.

ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.

ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.

ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.

ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,

ಅವನು ನೆಲಕ್ಕೆ ಬಿದ್ದನು. ಆಗ, ‹“ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?”› ಎಂದು ಹೇಳುವ ವಾಣಿಯನ್ನು ಕೇಳಿದನು.