¶ ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.
TSK
TSK · ಧರ್ಮೋಪದೇಶಕಾಂಡ 24:13
Treasury of Scripture Knowledge references in ಕನ್ನಡ IRV.
ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು.
ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.
ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು.
ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ?
ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.
ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.
ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,
ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.