¶ ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.
TSK
TSK · ಧರ್ಮೋಪದೇಶಕಾಂಡ 26:2
Treasury of Scripture Knowledge references in ಕನ್ನಡ IRV.
ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.
ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.
ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.
ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.
¶ ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.
ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.
¶ ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.
ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.
ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ.
ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.
¶ ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.
ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.
ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.