ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
TSK
TSK · ಧರ್ಮೋಪದೇಶಕಾಂಡ 27:3
Treasury of Scripture Knowledge references in ಕನ್ನಡ IRV.
ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.
ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.
ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.
ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.
ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.
ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.