TSK

TSK · ಧರ್ಮೋಪದೇಶಕಾಂಡ 28:36

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.

ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.

ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.

ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.

ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.

ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,

ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.

ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು.

ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು.

¶ ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.

ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.

ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.

ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಆಚೆಗೆ ಸಾಗಿಸುವರು; ಅವನು ಮುಖವನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸುವುದಿಲ್ಲ.’

¶ ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”