TSK

TSK · ಧರ್ಮೋಪದೇಶಕಾಂಡ 28:39

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು, ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು.

ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.

ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.

ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,