TSK

TSK · ಧರ್ಮೋಪದೇಶಕಾಂಡ 28:52

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.

¶ ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.

¶ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.

ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.

“ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.

ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು.

¶ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,

¶ “ನರಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ಪಟ್ಟಣದ ನಕ್ಷೆಯನ್ನು ಬರೆ.

ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ!

¶ ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.

¶ ‹“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ›‹ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ› (ಇದನ್ನು ಓದುವವನು ತಿಳಿದುಕೊಳ್ಳಲಿ)

¶ ‹“ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.›