TSK

TSK · ಧರ್ಮೋಪದೇಶಕಾಂಡ 28:63

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.

ಆದಕಾರಣ ಬಿರುಗಾಳಿಯಂತೆ ಅಪಾಯವೂ, ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ

¶ ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.

¶ ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.

ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.

ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.

ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.

ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.

¶ “ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.

ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.

ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.

‹ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ.›

‹ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.›