“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’
TSK
TSK · ಧರ್ಮೋಪದೇಶಕಾಂಡ 28:68
Treasury of Scripture Knowledge references in ಕನ್ನಡ IRV.
ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.
ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.
ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.
ಹೌದು ನನ್ನ ಜನರಿಗಾಗಿ ಚೀಟುಹಾಕಿ, ವೇಶ್ಯ ವೃತ್ತಿಗೆ ತಮ್ಮ ಗಂಡು ಮಕ್ಕಳನ್ನು ಮಾರಾಟ ಮಾಡಿ, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕೆ ಬದಲು ಮಾಡಿದ್ದಾರೆ.