“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.
TSK
TSK · ಧರ್ಮೋಪದೇಶಕಾಂಡ 29:6
Treasury of Scripture Knowledge references in ಕನ್ನಡ IRV.
ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.
ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.
ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಸಂಪೂರ್ಣವಾಗಿ ನಾಶಮಾಡಿದೆವು.
ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.
ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,