ಅರಣ್ಯಕಾಂಡ 32:41
TSK
ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.
TSK
Treasury of Scripture Knowledge references in ಕನ್ನಡ IRV.
ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.
ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.
ದಾವೀದನು ತನ್ನ ಮಗನಿಗೋಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು.
ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್,
ಸೆಗೂಬನು ಯಾಯೀರನನ್ನು ಪಡೆದನು; ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತ್ಮೂರು ಪಟ್ಟಣಗಳು ಇದ್ದವು.