TSK

TSK · ಧರ್ಮೋಪದೇಶಕಾಂಡ 30:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ

ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.

ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.

ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.

ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ.

ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.

ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.

ನಮ್ಮ ನಡತೆಯನ್ನು ಶೋಧಿಸಿ, ಪರೀಕ್ಷಿಸಿಕೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳೋಣ.

ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.

ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”

ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು.

ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.