ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.
TSK
TSK · ಧರ್ಮೋಪದೇಶಕಾಂಡ 32:10
Treasury of Scripture Knowledge references in ಕನ್ನಡ IRV.
ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ.
ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.
ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,
ನನ್ನ ಉಪದೇಶವನ್ನು ಕಣ್ಣುಗುಡ್ಡೆಯಂತೆ ಪಾಲಿಸು, ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು.
‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.
ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,
ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಆತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ.