TSK

TSK · ಧರ್ಮೋಪದೇಶಕಾಂಡ 32:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.

ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.

ಜೇನೂ, ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವುದೇ ಇಲ್ಲ.

ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.

ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು.

ಟಗರುಗಳ, ಕುರಿಗಳ, ಹೋತಗಳ, ಹೋರಿಗಳ ಅಂತು ಬಾಷಾನಿನ ಕೊಬ್ಬಿದ ಪಶುಗಳ ರಕ್ತವನ್ನು ಕುಡಿಯುವಿರಿ. ನೀವು ಬಲಿಷ್ಠರ ಮತ್ತು ಭೂಪತಿಗಳ ಮಾಂಸವನ್ನು ತಿನ್ನುವಿರಿ.

¶ ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.

‹ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ›‹ಒಡಂಬಡಿಕೆಯ ರಕ್ತ.›