ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”
TSK
TSK · ಧರ್ಮೋಪದೇಶಕಾಂಡ 32:29
Treasury of Scripture Knowledge references in ಕನ್ನಡ IRV.
ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
“ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.
ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?
ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.
¶ ‹“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.›
¶ ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,