ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
TSK
TSK · ಧರ್ಮೋಪದೇಶಕಾಂಡ 32:41
Treasury of Scripture Knowledge references in ಕನ್ನಡ IRV.
ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.
ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.
ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.
ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.
ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.
ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.
ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.
ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.
ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.”
¶ ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”
ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.