¶ “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ
TSK
TSK · ಧರ್ಮೋಪದೇಶಕಾಂಡ 33:10
Treasury of Scripture Knowledge references in ಕನ್ನಡ IRV.
ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
ತರುವಾಯ ಸರ್ವಾಂಗಹೋಮ ಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.
ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.
¶ “ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರೆಲ್ಲರಿಗೂ,
ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.
ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.
ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.
ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.
ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.
ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ.
ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.
ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.
‹“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ›‹ಕುಳಿತುಕೊಂಡಿದ್ದಾರೆ;›
ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, ‹“ಯೋಹಾನನ ಮಗನಾದ ಸೀಮೋನನೇ,›‹ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?”› ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, ‹“ನನ್ನ ಕುರಿಮರಿಗಳನ್ನು ಮೇಯಿಸು”› ಎಂದು ಹೇಳಿದನು.
ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.