¶ ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.
TSK
TSK · ಧರ್ಮೋಪದೇಶಕಾಂಡ 33:2
Treasury of Scripture Knowledge references in ಕನ್ನಡ IRV.
ಅವರು ಮೊದಲು ಮಿದ್ಯಾನಿಗೂ, ಆ ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು.
ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು, ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಾ ಬರುವಾಗ, ಸೆಲಾ
ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;
ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.
¶ ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.
ಏಕೆಂದರೆ, “ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ.
¶ ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.