ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.
TSK
TSK · ಧರ್ಮೋಪದೇಶಕಾಂಡ 33:27
Treasury of Scripture Knowledge references in ಕನ್ನಡ IRV.
ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.
ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.
ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.
ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ
ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.
ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.
ಯೆಹೋವನೇ ನನ್ನ ಶರಣನು! ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.
ನನ್ನ ಆಯುಷ್ಯವನ್ನು ಕಡಿಮೆ ಮಾಡಿಬಿಟ್ಟಿದ್ದಾನೆ. ಆದುದರಿಂದ, “ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; ನಿನ್ನ ವರ್ಷಗಳು ತಲತಲಾಂತರಕ್ಕೂ ಇರುತ್ತವೆ.
ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.
ಆತನ ಎಡಗೈ ನನಗೆ ತಲೆದಿಂಬಾಗಿದ್ದರೆ, ಆತನ ಬಲಗೈ ನನ್ನನ್ನು ಆಲಂಗಿಸಿದರೆ ನನಗೆ ಪರಮಾನಂದ!
ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.
ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.
ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.
ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.
ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.
‹ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.›
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.