TSK

TSK · ಧರ್ಮೋಪದೇಶಕಾಂಡ 33:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೂದದ ಕುಲಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ವಿವರ:

¶ ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.

ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.

ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾ ಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಉನ್ನತಿಗೆ ತರುವೆನು.

ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.

ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.

ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.

ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು,

ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.

ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.

¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.

ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು.