TSK

TSK · ಧರ್ಮೋಪದೇಶಕಾಂಡ 33:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”

ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.

¶ ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.

ದೇವರೇ, ಇದು ಸಾಲದೆಂದೆಣಿಸಿ, ನಿನ್ನ ಸೇವಕನ ಮುಂಬರುವ ಸಂತಾನದ ವಿಷಯವಾಗಿಯೂ ನನಗೆ ವಾಗ್ದಾನಮಾಡಿರುವೆ. ದೇವರೇ, ಯೆಹೋವನೇ, ನಾನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ನೀನು ನನ್ನನ್ನು ಕಟಾಕ್ಷಿಸಿದ್ದೀ.

ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.

‹ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.›

ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.

ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.

ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.