¶ ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.
TSK
TSK · ಧರ್ಮೋಪದೇಶಕಾಂಡ 4:10
Treasury of Scripture Knowledge references in ಕನ್ನಡ IRV.
ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.
ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.
ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”
ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.
ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.
ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.
ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.
¶ ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.
¶ ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.