ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.
TSK
TSK · ಧರ್ಮೋಪದೇಶಕಾಂಡ 4:28
Treasury of Scripture Knowledge references in ಕನ್ನಡ IRV.
ಅವರು ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.
ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ.
ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.
ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.
ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.
ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ. ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.
“ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.”
ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;