¶ ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,
TSK
TSK · ಧರ್ಮೋಪದೇಶಕಾಂಡ 4:29
Treasury of Scripture Knowledge references in ಕನ್ನಡ IRV.
ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.
ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.
ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.
ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.
ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.
ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ, ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.