¶ ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.
TSK
TSK · ಧರ್ಮೋಪದೇಶಕಾಂಡ 4:30
Treasury of Scripture Knowledge references in ಕನ್ನಡ IRV.
ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”
ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.
¶ “ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,
ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.
ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
ನಮ್ಮ ನಡತೆಯನ್ನು ಶೋಧಿಸಿ, ಪರೀಕ್ಷಿಸಿಕೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳೋಣ.
ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.
ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.
ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”
ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.
ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.