ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.
TSK
TSK · ಧರ್ಮೋಪದೇಶಕಾಂಡ 4:37
Treasury of Scripture Knowledge references in ಕನ್ನಡ IRV.
¶ ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.
¶ ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.
ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.
ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.
ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.
ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ.
ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.
ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
¶ ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.
ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.