ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
TSK
TSK · ಧರ್ಮೋಪದೇಶಕಾಂಡ 4:46
Treasury of Scripture Knowledge references in ಕನ್ನಡ IRV.
ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.
ಯೆಹೋವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ, ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯವೇ ಮೋಶೆಯು ಇದನ್ನೆಲ್ಲಾ ತಿಳಿಸಿದನು.
ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
¶ ಆಗ ನಾವು ಬೇತ್ಪೆಗೋರಿಗೆ ಮುಂದೆ ಇದ್ದ ಕಣಿವೆಯಲ್ಲಿ ವಾಸವಾಗಿದ್ದೆವು.
ಮೋವಾಬ್ಯರ ದೇಶದಲ್ಲಿ ಬೇತ್ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.
ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.