TSK

TSK · ಧರ್ಮೋಪದೇಶಕಾಂಡ 4:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನದ ವಿಶೇಷತೆಯನ್ನು ಕುರಿತು ಕೇಳಿದ ಅನೇಕ ರಾಜರೂ ಮತ್ತು ವಿದ್ವಾಂಸರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಬರುತ್ತಿದ್ದರು.

ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.

ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.

ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ, ಸದಾಕಾಲವೂ ಅವೇ ನನಗಿವೆ.

ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.

ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.

ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇದು ಯೆರೂಸಲೇಮ್; ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.

‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬುದು ನನಗೆ ಗೊತ್ತು; ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;

ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.