ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.
TSK
TSK · ಧರ್ಮೋಪದೇಶಕಾಂಡ 5:29
Treasury of Scripture Knowledge references in ಕನ್ನಡ IRV.
ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.
ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.
ಯೆಹೋವನ ದೃಷ್ಟಿಗೆ ಯಾವುದು ನ್ಯಾಯವೂ ಮತ್ತು ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವುದು, ಮತ್ತು ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
¶ ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,
¶ ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.
¶ ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು.
ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸು ಉಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.
¶ ನವೊಮಿಯು ಸೊಸೆಗೆ, “ನನ್ನ ಮಗಳೇ, ನಿನಗೆ ಒಳ್ಳೆಯದಾಗುವುದಕ್ಕಾಗಿ, ನೀನು ಗೃಹಿಣಿಯಾಗಿ ಸುಖದಿಂದಿರುವುದಕ್ಕೋಸ್ಕರ ನಾನು ಪ್ರಯತ್ನಿಸಬೇಕಲ್ಲವೇ?
ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.
ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!
ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು.
ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.
ಆಹಾ, “ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು” ಎಂದು ಹೇಳಿ, ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!
ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
ಅದಕ್ಕೆ ಯೇಸು, ‹“ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು”› ಅಂದನು.
‹ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.›
¶ ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.
ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
¶ ‹“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ›‹ಜೀವವೃಕ್ಷದ ಹಕ್ಕು ಇರುವುದು.›‹ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.›