ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.
TSK
TSK · ಧರ್ಮೋಪದೇಶಕಾಂಡ 7:19
Treasury of Scripture Knowledge references in ಕನ್ನಡ IRV.
ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.
ಸಮಸ್ತ ಪ್ರಜೆಗಳಿಗೂ ಮಾಡಿದವುಗಳನ್ನು ನೋಡಿದ್ದೀರಿ. ಮಹಾಪರಿಶೋಧನೆ, ಉತ್ಪಾತ ಮತ್ತು ಮಹತ್ಕಾರ್ಯಗಳನ್ನು ನೀವು ನೋಡೇ ನೋಡಿದ್ದೀರಿ.
ಆಗ ಅವನು ಅವರಿಗೆ “ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು” ಎಂದು ಹೇಳಿದನು.
ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.
ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು.
ಆ ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆನು.