TSK

TSK · ಧರ್ಮೋಪದೇಶಕಾಂಡ 7:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ.

ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.

ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.

ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.

ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ,

“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.

ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!

ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,

ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.

ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.

ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ

ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.

ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.

“ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು.