ಜನರು ಮಾಡಿಸಿಕೊಂಡಿದ್ದ ಹೋರಿಕರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು.
TSK
TSK · ಧರ್ಮೋಪದೇಶಕಾಂಡ 7:25
Treasury of Scripture Knowledge references in ಕನ್ನಡ IRV.
¶ “‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.
¶ ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.
¶ ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ.
‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.
ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ.
ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.