ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.
TSK
TSK · ಧರ್ಮೋಪದೇಶಕಾಂಡ 7:8
Treasury of Scripture Knowledge references in ಕನ್ನಡ IRV.
ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.
ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.
¶ ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು,
¶ ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.
ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.
ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.
ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.
ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.
ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.
ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ, ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.
‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,
‹ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.›
ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.
¶ ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.
¶ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,