TSK

TSK · ಧರ್ಮೋಪದೇಶಕಾಂಡ 7:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

¶ ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;

ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.

ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.

“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.

ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,

ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.

ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.

ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,

ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!

¶ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.

ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.

ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ.

ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.

ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.

ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.

¶ ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.