¶ ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ
TSK
TSK · ಧರ್ಮೋಪದೇಶಕಾಂಡ 9:6
Treasury of Scripture Knowledge references in ಕನ್ನಡ IRV.
“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.
ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ.
ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ.
ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.
ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು” ಇದು ಕರ್ತನಾದ ಯೆಹೋವನ ನುಡಿ.
¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.